ಬಾಗಲಕೋಟೆ 10/04/23 ಜಮಖಂಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸ್ಥಾಪಿಸಲಾದ ಹುನ್ನೂರ ಚೆಕ್ ಪೋಸ್ಟ್ನಲ್ಲಿ ದಾಖಲೆ ಇಲ್ಲದ ಒಟ್ಟು 2.10 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಸುನೀಲ್ ಕುಮಾರ ತಿಳಿಸಿದ್ದಾರೆ.
ಈ ವೇಳೆ ಅನುಮಾನಾಸ್ಪವಾಗಿ ಚಲಿಸುತ್ತಿದ್ದ ವಾಹನ ತಡೆದು ನಿಲ್ಲಿಸಿ, ತಪಾಸಣೆಗೆ ಒಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜಮಖಂಡಿಯ ಹುನ್ನೂರ ಚೆಕ್ ಪೋಸ್ಟ್ನಲ್ಲಿ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದರು.
ಪತ್ತೆಯಾದ ಹಣ ಸೌಹಾರ್ದ ಬ್ಯಾಂಕ್ಗೆ ಸೇರಿದ್ದು ಎಂದು ಹೇಳಿದ್ದಾರೆ. ಆದರೆ, ಅವರು ಒದಗಿಸಿರುವ ದಾಖಲೆಗಳು ಪರಿಪೂರ್ಣವಾಗಿಲ್ಲ. ಹೀಗಾಗಿ ದಾಖಲೆ ಒದಗಿಸಲು ಹೆಚ್ಚಿನ ಕಾಲಾವಕಾಶ ನೀಡಲಾಗಿದೆ.
ಸದ್ಯಕ್ಕೆ ಮೊತ್ತವನ್ನು ಮುಟ್ಟುಗೋಲು ಹಾಕಿಕೊಂಡಿದ್ದು ಚುನಾವಣಾಧಿಕಾರಿಗಳ ಕಚೇರಿಯಿಂದ ಜಮಖಂಡಿಯ ಸರ್ಕಾರಿ ಖಜಾನೆಗೆ ಜಮಾ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಹಣದ ಮಾಲೀಕರು ಒಂದು ಸೌಹಾರ್ದ ಕ್ರೆಡಿಟ್ ಸಹಕಾರಿ ಲಿಮಿಟೆಡ್ಗೆ ಸಂಬಂಧಿಸಿದವರು. ಅವರು ಹಿಪ್ಪರಗಿ, ಸತ್ತಿ, ಅಥಣಿ, ಬನಹಟ್ಟಿ, ರಬಕವಿ ಹಾಗೂ ಬೇರೆ ಬೇರೆ ಶಾಖೆಗಳಿಗೆ ಹಣ ರವಾನಿಸುತ್ತಿರುವುದಾಗಿ ಮೌಖಿಕ ಮಾಹಿತಿ ನೀಡಿದ್ದಾರೆ.
ವರದಿ – ಸಂಪಾದಕೀಯ ಸುದ್ದಿ ಅಗಸ್ತ್ಯ ಟೈಮ್ಸ್.

