ಬೆಂಗಳೂರು: ವಿಧಾನ ಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ (Congress Government) ವಿರುದ್ಧ ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿರುವ ವಿಜಯಪುರದ (Vijayapura) ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಕಾಂಗ್ರೆಸ್ ಸರ್ಕಾರದ ಯಾವ ರಾಜಕಾರಣಿ ಅಥವಾ ಮಂತ್ರಿಗಳ ಜೊತೆಯೂ ನಮ್ಮ ಅಡ್ಜಸ್ಟ್ಮೆಂಟ್ ರಾಜಕೀಯ ಇಲ್ಲ ಎಂದು ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಾವು ಎಲ್ಲಾ ಬಿಜೆಪಿ ಶಾಸಕರು ಸದನದಲ್ಲಿ ಸಮರ್ಥವಾಗಿ ವಿರೋಧ ಪಕ್ಷವಾಗಿ ಕೆಲಸ ನಿರ್ವಹಿಸುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಹಾಗೂ ಸರ್ಕಾರದ ವೈಫಲ್ಯದ ಕುರಿತು ನಮ್ಮ ಎಲ್ಲಾ ಶಾಸಕ ಮಿತ್ರರು ಸಮರ್ಥವಾಗಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

https://help.twitter.com/en/twitter-for-websites-ads-info-and-privacy
https://help.twitter.com/en/twitter-for-websites-ads-info-and-privacy
https://help.twitter.com/en/twitter-for-websites-ads-info-and-privacy
https://help.twitter.com/en/twitter-for-websites-ads-info-and-privacy
